TSK

TSK · ಆದಿಕಾಂಡ 41:54

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.

ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.

“ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.

¶ ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.

ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.