¶ ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
TSK
TSK · ಆದಿಕಾಂಡ 41:8
Treasury of Scripture Knowledge references in ಕನ್ನಡ IRV.
ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.
ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
¶ “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು
ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.
ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.
ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.
¶ ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
¶ “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.
ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.
¶ ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
¶ ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”