TSK

TSK · ಆದಿಕಾಂಡ 42:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

¶ ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.

ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.

ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.

ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು.