TSK

TSK · ಆದಿಕಾಂಡ 43:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.

ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.

¶ ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.

¶ ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.

ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.

ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.

ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.

ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.

ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.

ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.

ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.

ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.