ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
TSK
TSK · ಆದಿಕಾಂಡ 45:21
Treasury of Scripture Knowledge references in ಕನ್ನಡ IRV.
¶ ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.
ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು.
ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!