TSK

TSK · ಆದಿಕಾಂಡ 45:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.

ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.