¶ ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
TSK
TSK · ಆದಿಕಾಂಡ 48:15
Treasury of Scripture Knowledge references in ಕನ್ನಡ IRV.
ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.
ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.
ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.
ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.
ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.
¶ ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:
ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
¶ ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
¶ ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.
ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.
ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.