ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
TSK
TSK · ಆದಿಕಾಂಡ 50:24
Treasury of Scripture Knowledge references in ಕನ್ನಡ IRV.
ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
¶ ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.
ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು.
¶ ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.
ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.
ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.
¶ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.
ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.
ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.
ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,