TSK

TSK · ಆದಿಕಾಂಡ 6:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.

ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.

ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.

ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.

ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.

¶ “‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.

ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.

ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.