ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.
TSK
TSK · ಆದಿಕಾಂಡ 6:8
Treasury of Scripture Knowledge references in ಕನ್ನಡ IRV.
ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.
ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.
ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.
ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.
ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.