ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.
TSK
TSK · ಆದಿಕಾಂಡ 7:23
Treasury of Scripture Knowledge references in ಕನ್ನಡ IRV.
ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ?
ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.
‹ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.›
‹ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.›
ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.
ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.