TSK

TSK · ಆದಿಕಾಂಡ 9:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.

¶ “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.

ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.

ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.

ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.

¶ ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ

¶ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,

ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.

ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.

ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,