ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
TSK
TSK · ಆದಿಕಾಂಡ 9:6
Treasury of Scripture Knowledge references in ಕನ್ನಡ IRV.
¶ ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
¶ ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.
ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
¶ “‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
¶ “‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,
ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.
¶ ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.
ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.
ಆಗ ಯೇಸು ಅವನಿಗೆ, ‹“ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,›
ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.