TSK

TSK · ಹಗ್ಗಾಯ 1:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,

ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.

ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.

ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?

ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ

ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.

“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;

“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”

‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.

¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.