TSK

TSK · ಹಗ್ಗಾಯ 1:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.

ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು.

“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.

ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,

ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ.