TSK

TSK · ಹಗ್ಗಾಯ 2:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.

ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.

ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.

ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.

ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.

ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.

ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.

¶ “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.

ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.

ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.

ಯಾಕೋಬೇ, ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ. ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.

ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”

¶ ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.

¶ ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.

ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.”

‹ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;›