‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
TSK
TSK · ಹಗ್ಗಾಯ 2:5
Treasury of Scripture Knowledge references in ಕನ್ನಡ IRV.
¶ ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.
¶ ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,
ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
¶ ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.
ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.
ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?
ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”
ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.