¶ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.
TSK
TSK · ಇಬ್ರಿಯರಿಗೆ 10:20
Treasury of Scripture Knowledge references in ಕನ್ನಡ IRV.
¶ “ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.
ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;
¶ ಆಗ ಯೇಸು ಪುನಃ ಅವರಿಗೆ, ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,›
ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›
¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.