TSK

TSK · ಇಬ್ರಿಯರಿಗೆ 10:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.

ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.

ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.

ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.

ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.

ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.

¶ ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.

ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.

ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.

‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›

‹ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ”› ಅಂದನು.

‹ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.›

ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.

ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.