ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
TSK
TSK · ಇಬ್ರಿಯರಿಗೆ 10:28
Treasury of Scripture Knowledge references in ಕನ್ನಡ IRV.
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು.
ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
‹ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ›‹ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.›
“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.