ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.
TSK
TSK · ಇಬ್ರಿಯರಿಗೆ 10:4
Treasury of Scripture Knowledge references in ಕನ್ನಡ IRV.
ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;
¶ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.
ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.
ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?
¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.