¶ ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
TSK
TSK · ಇಬ್ರಿಯರಿಗೆ 11:32
Treasury of Scripture Knowledge references in ಕನ್ನಡ IRV.
¶ ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.
ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
¶ ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.
ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
¶ ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.
¶ ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
‹ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.›
ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.
ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
¶ ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
¶ ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.