ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.
TSK
TSK · ಇಬ್ರಿಯರಿಗೆ 11:36
Treasury of Scripture Knowledge references in ಕನ್ನಡ IRV.
¶ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು
¶ ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.
¶ ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.
ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.
ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
¶ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
‹ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು›‹ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು”› ಎಂದು ಹೇಳಿದನು.
‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
‹ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ›‹ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು”› ಎಂದು ಹೇಳಿದನು.
ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
¶ ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.
¶ ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›