ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
TSK
TSK · ಇಬ್ರಿಯರಿಗೆ 11:37
Treasury of Scripture Knowledge references in ಕನ್ನಡ IRV.
¶ ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
ಯೇಸು ಅವನಿಗೆ, ‹“ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ”› ಎಂದು ಹೇಳಿದನು.
‹ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.›
‹ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!›
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.
ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.