¶ ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?
TSK
TSK · ಇಬ್ರಿಯರಿಗೆ 11:6
Treasury of Scripture Knowledge references in ಕನ್ನಡ IRV.
ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ
ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.
ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,
ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.
ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
‹ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.›
¶ ‹“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.›
¶ ‹“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;›
‹ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.›
‹ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು›‹ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ”› ಎಂದು ಹೇಳಿದನು.
¶ ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
¶ ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.
ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.
ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.