¶ ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
TSK
TSK · ಇಬ್ರಿಯರಿಗೆ 11:8
Treasury of Scripture Knowledge references in ಕನ್ನಡ IRV.
ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.
ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.
ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.
¶ ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.
ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.
ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.
ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;
ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,
¶ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?