¶ “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
TSK
TSK · ಇಬ್ರಿಯರಿಗೆ 12:22
Treasury of Scripture Knowledge references in ಕನ್ನಡ IRV.
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?
ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.
ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.
ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
¶ “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;
ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
‹ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ;›‹ಅದು ಆ ಮಹಾ ರಾಜನ ಪಟ್ಟಣವಾಗಿದೆ.›
ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.
ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.
ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
¶ ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,
¶ ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
¶ ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.