ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
TSK
TSK · ಇಬ್ರಿಯರಿಗೆ 13:12
Treasury of Scripture Knowledge references in ಕನ್ನಡ IRV.
ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
¶ ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.
ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.
ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?