TSK

TSK · ಇಬ್ರಿಯರಿಗೆ 13:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.

ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.

ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.

ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?

¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.

‹ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ›‹ಒಡಂಬಡಿಕೆಯ ರಕ್ತ.›

ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, ‹“ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.›

‹ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.›

ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.

ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.

ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.

ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.

ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.

¶ ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.

¶ ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.

ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.

ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.

ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.