¶ ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಬಾರದು.
TSK
TSK · ಇಬ್ರಿಯರಿಗೆ 13:9
Treasury of Scripture Knowledge references in ಕನ್ನಡ IRV.
‹ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.
ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
¶ ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.
¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
¶ ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
¶ ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.
ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು.
¶ ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.