ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.
TSK
TSK · ಇಬ್ರಿಯರಿಗೆ 2:15
Treasury of Scripture Knowledge references in ಕನ್ನಡ IRV.
ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು.
ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.
ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.