TSK

TSK · ಇಬ್ರಿಯರಿಗೆ 2:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.

ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”

ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”

ಅಂದಿನಿಂದ ಯೇಸು, ‹“ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು”› ಎಂದು ಸಾರುವುದಕ್ಕೆ ಪ್ರಾರಂಭಿಸಿದನು.

ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,

ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,

¶ ಆತನು ಅವರನ್ನು, ‹“ಯಾವ ಸಂಗತಿಗಳು”› ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.

¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›

ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?

ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.

ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.

ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?

ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.