TSK

TSK · ಇಬ್ರಿಯರಿಗೆ 3:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.

ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.

¶ “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.

ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.

ಯೇಸು ಅವರಿಗೆ, ‹“ನಿಮಗೆ ಸಮಾಧಾನವಾಗಲಿ”› ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.

ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,

ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,

ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.

ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.

ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,

ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.

ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.

ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ.

ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.

ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.

ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.

ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.

¶ ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.

ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.

¶ ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.

ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.

ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.

ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.

ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”