TSK

TSK · ಇಬ್ರಿಯರಿಗೆ 4:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ

ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.

ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.

ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.

ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.

ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.

ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.

‹ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು”› ಎಂದು ಹೇಳಿದನು.

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.

¶ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,

ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.

¶ ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.

ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.

ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.

ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.

‹ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ›‹ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.›‹ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.›

ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.