“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.
TSK
TSK · ಇಬ್ರಿಯರಿಗೆ 4:16
Treasury of Scripture Knowledge references in ಕನ್ನಡ IRV.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›
ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ
ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.
ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.
ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.