ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
TSK
TSK · ಇಬ್ರಿಯರಿಗೆ 4:2
Treasury of Scripture Knowledge references in ಕನ್ನಡ IRV.
ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.
¶ ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.
ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.
¶ ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.