ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
TSK
TSK · ಇಬ್ರಿಯರಿಗೆ 4:3
Treasury of Scripture Knowledge references in ಕನ್ನಡ IRV.
ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.
ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.