“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
TSK
TSK · ಇಬ್ರಿಯರಿಗೆ 5:4
Treasury of Scripture Knowledge references in ಕನ್ನಡ IRV.
ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.
ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.