“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.
TSK
TSK · ಇಬ್ರಿಯರಿಗೆ 6:19
Treasury of Scripture Knowledge references in ಕನ್ನಡ IRV.
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು.
ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.
ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು
ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.
ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.