TSK

TSK · ಇಬ್ರಿಯರಿಗೆ 6:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.

¶ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.

¶ ‹“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.›

‹ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು”› ಅಂದನು.

¶ ‹“ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,›

ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.

‹ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.›

ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,

ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.

¶ ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.

ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?

ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.

¶ ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.

¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.

¶ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.