ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
TSK
TSK · ಇಬ್ರಿಯರಿಗೆ 6:8
Treasury of Scripture Knowledge references in ಕನ್ನಡ IRV.
ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.
ಗೋದಿಗೆ ಬದಲಾಗಿ ಮುಳ್ಳುಗಳೂ, ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. ಹೀಗೆ ಯೋಬನ ಮಾತುಗಳು ಮುಗಿದವು.
ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
‹ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.›
ಆಗ ಯೇಸು ಆ ಮರಕ್ಕೆ, ‹“ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ”› ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು.
‹ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.›
ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.