ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.
TSK
TSK · ಇಬ್ರಿಯರಿಗೆ 7:19
Treasury of Scripture Knowledge references in ಕನ್ನಡ IRV.
ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
¶ ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು
ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
¶ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.