ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.
TSK
TSK · ಇಬ್ರಿಯರಿಗೆ 7:25
Treasury of Scripture Knowledge references in ಕನ್ನಡ IRV.
ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.
ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.
“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.
‹ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.›
ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›
‹ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.›
‹ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.›
ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
¶ ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
¶ ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
¶ ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.