ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
TSK
TSK · ಇಬ್ರಿಯರಿಗೆ 7:26
Treasury of Scripture Knowledge references in ಕನ್ನಡ IRV.
ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.” ಇದು ಕರ್ತನಾದ ಯೆಹೋವನ ನುಡಿ.
¶ ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
¶ ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
¶ ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›
‹ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ›‹ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.›
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
¶ ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
¶ ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
¶ ‹“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,›‹ಪರಿಶುದ್ಧನೂ,›‹ಸತ್ಯವಂತನೂ,›‹ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,›‹ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,›