TSK

TSK · ಇಬ್ರಿಯರಿಗೆ 9:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

‹ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು”› ಎಂದು ಹೇಳಿದನು.

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.

¶ ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.

ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.