TSK

TSK · ಇಬ್ರಿಯರಿಗೆ 9:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.

¶ “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.

ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.

ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.

ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.

ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,

ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.

ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.

ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.

ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.