TSK

TSK · ಇಬ್ರಿಯರಿಗೆ 9:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.

¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

¶ ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.

ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.

ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.

ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!

ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.

ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.

ಮಂಜೂಷದಲ್ಲಿ ಎರಡು ಕಲ್ಲಿನ ಹಲಗೆಗಳ ಹೊರತಾಗಿ ಬೇರೇನೂ ಇರಲಿಲ್ಲ, ಐಗುಪ್ತ ದೇಶದಿಂದ ಬಂದ ಇಸ್ರಾಯೇಲರೊಡನೆ, ಹೋರೇಬ್ ಬೆಟ್ಟದ ಬಳಿಯಲ್ಲಿ ಯೆಹೋವನು ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.

¶ ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.