TSK

TSK · ಹೋಶೇ 11:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.

“ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,

ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.

ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.

ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.

ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.

¶ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

¶ ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.