ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
TSK
TSK · ಹೋಶೇ 11:9
Treasury of Scripture Knowledge references in ಕನ್ನಡ IRV.
ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.
ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,
ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.
ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
¶ ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.
¶ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.
ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.
ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.
ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.