TSK

TSK · ಹೋಶೇ 12:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.

“ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?

ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.

ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

¶ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

¶ ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.

ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.

¶ “ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.

ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”

ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.

ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.

ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.

ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.

‹ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.›

ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.